ವದಂತಿಗಳನ್ನು ನಂಬಬೇಡಿ - ಭಾರತದಾದ್ಯಂತ ಕೊರೊನಾ ಲಸಿಕೆ ಉಚಿತ

ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ.

og:image
ನವದೆಹಲಿ: ವಿಶ್ವದ ಅತಿದೊಡ್ಡ ರೋಗನಿರೋಧಕ ಲಸಿಕೆ ಯೋಜನೆಯನ್ನು ಪ್ರಾರಂಭಿಸಲು ಭಾರತ ಸಜ್ಜಾಗುತ್ತಿರುವಾಗ, ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು ಬಹುನಿರೀಕ್ಷಿತ ಲಸಿಕೆ ವಿರುದ್ಧದ ವದಂತಿಗಳಿಗೆ ಕಿವಿಗೊಡದಂತೆ ವಿನಂತಿಸಿದ್ದಾರೆ.

"ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ನಾನು ಜನರಿಗೆ ಮನವಿ ಮಾಡಲು ಬಯಸುತ್ತೇನೆ. ಲಸಿಕೆ ಪ್ರಯೋಗದಲ್ಲಿ ನಮ್ಮ ಪ್ರಮುಖ ಮಾನದಂಡವೆಂದರೆ ಸುರಕ್ಷತೆ ಮತ್ತು ಪರಿಣಾಮಕಾರಿತ್ವ" ಎಂದು ವರ್ಧನ್ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಣುಕು ಲಸಿಕಾ ಪ್ರಯೋಗ ಪರಿಶೀಲಿಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

ದೆಹಲಿ ಮಾತ್ರವಲ್ಲದೇ ಭಾರತದಾದ್ಯಂತ ಕೊರೊನಾ ಲಸಿಕೆ ಉಚಿತವಾಗಿದೆ. 

ದೆಹಲಿಯಲ್ಲಿ, ಶಹದಾರಾದ ಸರ್ಕಾರ ನಡೆಸುವ ಗುರು ತೇಜ್ ಬಹದ್ದೂರ್ ಆಸ್ಪತ್ರೆ, ದರಿಯಗಂಜ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ದ್ವಾರಕಾದ ಖಾಸಗಿ ವೆಂಕಟೇಶ್ವರ ಆಸ್ಪತ್ರೆ ಎಂಬ ಮೂರು ತಾಣಗಳಲ್ಲಿ ಅಣಕು ಲಸಿಕಾ ಪ್ರಯೋಗ ನಡೆಸಲಾಗುತ್ತಿದೆ.

"ಈ ಹಿಂದೆ ಪೋಲಿಯೊ ರೋಗನಿರೋಧಕ ಸಮಯದಲ್ಲಿ ವಿವಿಧ ರೀತಿಯ ವದಂತಿಗಳು ಹರಡಿದ್ದವು, ಆದರೆ ಜನರು ಅದನ್ನು ನಿರ್ಲಕ್ಷಿಸಿ ಲಸಿಕೆ ತೆಗೆದುಕೊಂಡರು ಮತ್ತು ಈಗ ಭಾರತ ಪೋಲಿಯೊ ಮುಕ್ತವಾಗಿದೆ" ಎಂದು ಕೇಂದ್ರ ಸಚಿವರು ನೆನಪಿಸಿದರು.

English Summary: health minister Harsh Vardhan requested people to not pay heed to the rumours against the much-awaited corona vaccine. Its free in India.   । NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.

ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ.

English Summary: - Nera News - Kannada breaking news fastest growing online News website delivers the Top News, Cinema News, Sports, Cricket, Karnataka, Politics, Photo Gallery, and Videos in Kannada Live news Channel, Kannada breaking news

Latest Kannada Breaking News