ಕಾಳಸಂತೆಯಲ್ಲಿ ಆಮ್ಲಜನಕ ಸಿಲಿಂಡರ್ ಮಾರಾಟ - ಆರೋಪಿ ಸಮೀರ್ ಬಂಧನ

ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ.

og:image
ಗಜಿಯಾಬಾದ್‌: ಏಪ್ರಿಲ್ 29 ರಂದು ಉತ್ತರ ಪ್ರದೇಶ ಪೊಲೀಸರು 638 ಆಮ್ಲಜನಕ ಸಿಲಿಂಡರ್‌ಗಳೊಂದಿಗೆ ಸಮೀರ್‌ನನ್ನು ಗಜಿಯಾಬಾದ್‌ನಲ್ಲಿ ಬಂಧಿಸಿದ್ದಾರೆ. ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯ ಮಧ್ಯೆ ಹತಾಶ ರೋಗಿಗಳಿಗೆ ಈ ಸಿಲಿಂಡರ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಪೊಲೀಸರು ಸುಮಾರು 638 ಆಮ್ಲಜನಕ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದಿದ್ದು, ಅರೋಪಿ ಸಮೀರ್ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸಣ್ಣ ಮತ್ತು ದೊಡ್ಡ ಆಮ್ಲಜನಕ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಕ್ರಮವಾಗಿ ಹತ್ತುಸಾವಿರ ಮತ್ತು ಮೂವತ್ತು ಸಾವಿರ ರೂಪಾಯಿಗಳಿಗೆ ಮಾರಾಟಮಾಡುತ್ತಿದ್ದ.  ದೆಹಲಿಯ ಶಹದಾರಾ ನಿವಾಸಿಯಾಗಿರುವ ಸಮೀರ್, ಖಾಲಿ ಸಿಲಿಂಡರ್‌ಗಳನ್ನು 10,000 ರಿಂದ 30,000 ರೂ.ಗೆ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಎಸ್‌ಎಸ್‌ಪಿ ಅಮಿತ್ ಪಾಠಕ್ ತಿಳಿಸಿದ್ದಾರೆ. ಸಮೀರ್ ಕೈಯಿಂದ ಖಾಲಿ ಸಿಲಿಂಡರ್ ಪಡೆದು, ರೋಗಿಗಳು ಅದಕ್ಕೆ ಆಮ್ಲಜನಕ ಬೇರೆಕಡೆ ತುಂಬಿಸಿಕೊಳ್ಳುತ್ತಿದ್ದರು.

ಗಜಿಯಾಬಾದ್‌ ಪೊಲೀಸರು ಸಮೀರನ ಮೇಲೆ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಕಾರ್ಖಾನೆಯ ಮಾಲೀಕ ದೆಹಲಿಯ ಪ್ರೀತ್ ವಿಹಾರ್ ಕಾಲೋನಿಯ ಜೈ ಗೋಪಾಲ್ ಮೆಹ್ತಾ ಪರಾರಿಯಾಗಿದ್ದಾರೆ ಎಂದು ಅವರು ಹೇಳಿದರು. ಅಗತ್ಯ ಸರಕುಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕಾರ್ಖಾನೆಯ ಮಾಲೀಕರನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ ಎಂದು ಪಾಠಕ್ ತಿಳಿಸಿದ್ದಾರೆ.

English Summary: । NeraNews.com is a leading daily news website, with latest updates from Politics, Sports, Crime, Science, Health, Latest Movie update, Matrimonial and other entertaining stories around the world. We have daily 20,000 page visitors.

ಕನ್ನಡದ ಹೊಚ್ಚ ಹೊಸ ನ್ಯೂಸ್ ಚಾನೆಲ್ ನೇರ ನ್ಯೂಸ್, ನಿಮಗಾಗಿ ಪ್ರತಿದಿನ ಹೊಸ ಹೊಸ ವಿಷಯಗಳನ್ನು ನಿಮ್ಮ ಮುಂದೆ ತರುತ್ತದೆ. ಇದನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಇಲ್ಲಿ ಕೆಳಗಿರುವ ಫಾಲೋ ಬಟನ್ ಪ್ರೆಸ್ ಮಾಡಿ.

English Summary: - Nera News - Kannada breaking news fastest growing online News website delivers the Top News, Cinema News, Sports, Cricket, Karnataka, Politics, Photo Gallery, and Videos in Kannada Live news Channel, Kannada breaking news

Latest Kannada Breaking News